ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯ ತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ 32 ವರ್ಷಗಳ ಕಾಲ ಜೀವಿಸಿದ್ದರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮ ಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
ಇವರು 8 ನೇ(ಕ್ರಿ.ಶ್.788) ಶತಮಾನದಲ್ಲಿ ಜನಿಸಿದರು ಎಂದು ನಂಬಲಾಗಿದೆ. ಇವರು ಹುಟ್ಟಿದ್ದು ಕೇರಳ ರಾಜ್ಯದ ಕಾಲಡಿ ಎಂಬ ಹಳ್ಳಿಯ ಒಂದು ಬಡ ವಿಶ್ವಬ್ರಾಹ್ಮಣ ಕುಟುಂಬದಲ್ಲಿ. ಹುಟ್ಟಿದ ದಿನ ವಿಭವ ಸಂವತ್ಸರದ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯಂದು. ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡರು. ಆಧ್ಯಾತ್ಮಿಕತೆಯಲ್ಲಿ ಆಸಕ್ತಿತಳೆದ ಇವರು ಸನ್ಯಾಸತ್ವವನ್ನು ಸ್ವೀಕರಿಸುವತ್ತ ಒಲವು ತೋರಿದರು. ಆದರೆ ಒಬ್ಬನೇ ಮಗನಾಗಿದ್ದ ಶಂಕರ ರನ್ನು ಸನ್ಯಾಸಿಯಾಗಿ ನೋಡಲು ತಾಯಿಗೆ ಮನಸ್ಸಿರಲಿಲ್ಲ. ಹಾಗಾಗಿ ತಾಯಿಯ ಮನವೊಲಿಸಲು ಶಂಕರರು ಬಹಳ ಕಷ್ಟಪಡಬೇಕಾಯಿತು.ಆಕೆಯ ಅಂತಿಮ ಕ್ಷಣಗಳಲ್ಲಿ ತಾನು ಎಲ್ಲಿದ್ದರೂ ಆಕೆಯ ಎದುರು ಬಂದು ನಿಲ್ಲುವುದಾಗಿ ಮಾತು ಕೊಟ್ಟ ಶಂಕರರು ಸೂಕ್ತ ಗುರುವಿಗಾಗಿ ಹುಡುಕುತ್ತಾ ತಮ್ಮ ಪಯಣವನ್ನಾರಂಭಿಸಿದರು. ತಾಯಿಗೆ ಕೊಟ್ಟ ಮಾತಿನ ಪ್ರಕಾರ ಆಕೆಯ ಕೊನೆಗಾಲದಲ್ಲಿ ಕಾಲಟಿಗೆ ಹಿಂದಿರುಗಿದ ಶಂಕರರು ಆಕೆಯ ಅಂತಿಮ ವಿಧಿಗಳನ್ನು ಪೂರೈಸಿದರು.ನರ್ಮದಾ ನದಿ ತೀರದಲ್ಲಿ ಗೋವಿಂದ ಭಗವತ್ಪಾದರನ್ನು ಭೇಟಿಯಾದ ಶಂಕರರು ಅವರನ್ನು ತನ್ನ ಗುರುಗಳನ್ನಾಗಿ ಸ್ವೀಕರಿಸಿದರು. ಅವರಿಂದ ಯೋಗ, ವೇದ, ಉಪನಿಷತ್, ವೇದಾಂತಗಳನ್ನು ಅಭ್ಯಸಿದದ ನಂತರ ಕಾಶಿಗೆ ತೆರಳಿ ಅಲ್ಲಿ ಕೆಲವರನ್ನು ತಮ್ಮ ಶಿಷ್ಯರನ್ನಾಗಿಸಿಕೊಂಡು ಅವರಿಗೂ ವೇದಾಂತದ ಪಾಠ ಹೇಳಿಕೊಟ್ಟರು.
ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ಶಂಕರರು ಅನೇಕರನ್ನು ಅಧ್ಯಾತ್ಮಕ್ಕೆ ಸಂಬಂಧಪಟ್ಟ ವಾದದಲ್ಲಿ ಸೋಲಿಸಿದರು. ಇವುಗಳಲ್ಲಿ ಮಂಡನ ಮಿಶ್ರರನ್ನು ವಾದದಲ್ಲಿ ಸೋಲಿಸಿದ ಘಟನೆ ಬಹು ಪ್ರಮುಖವಾದುದು. ಮಂಡನ ಮಿಶ್ರರೇ ನಂತರ ಶ್ರೀ ಸುರೇಶ್ವರಾಚಾಯ೯ ಎಂಬ ಹೆಸರಿನಿಂದ ಪ್ರಸಿದ್ಧರಾದ ಶಿಷ್ಯರಾದರು.ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠ (ಮಠ) ಗಳನ್ನು ಉತ್ತರದಲ್ಲಿ: ಬದರಿ ಪೀಠ - ಉತ್ತರ ಜ್ಯೋತಿರ್ ಮಠದಕ್ಷಿಣದಲ್ಲಿ: ಶೃಂಗೇರಿ ಪೀಠ - ದಕ್ಷಿಣ ಶಾರದಾ ಮಠಪೂರ್ವದಲ್ಲಿ: ಪುರಿ ಪೀಠ - ಪೂರ್ವಾ ಗೋವರ್ಧನ ಮಠಪಶ್ಚಿಮದಲ್ಲಿ ದ್ವಾರಕಾ ಪೀಠ - ಪಶ್ಚಿಮ ಮಠ ಸ್ಥಾಪಿಸಿ, ಪ್ರತಿಯೊಂದು ಪೀಠಕ್ಕೂ ತಮ್ಮ ಒಬ್ಬೊಬ್ಬ ಶಿಷ್ಯರನ್ನು ಪೀಠಾಧಿಪತಿಯನ್ನಾಗಿಸಿದರು."ಅದ್ವೈತ" ಸಿದ್ಧಾಂತ ವನ್ನು ಜನಪ್ರಿಯಗೊಳಿಸಿದರು. ಹಲವಾರು ಪಂಡಿತರನ್ನೂ ಶಾಸ್ತ್ರವೇತ್ತರನ್ನೂ ಜಯಿಸಿ, ಸರ್ವಜ್ಞ ಪೀಠವನ್ನೇರಿದರು. ಭಾರತದ ದಕ್ಷಿಣದಲ್ಲಿ ವಾದ ಮಾಡಿ ತಮ್ಮನ್ನು ಜಯಿಸುವವರೇ ಇಲ್ಲವೆಂದು ಹೀಗಳೆದು ಶಾರದೆಯ ದೇಗುಲದ ದಕ್ಷಿಣದ ಬಾಗಿಲನ್ನು ಮುಚ್ಚಿಸಿದ್ದ ಕಾಶ್ಮೀರದ ಪಂಡಿತರ ಬಾಯಿ ಮುಚ್ಚಿಸಿದರು;
ಶಂಕರರು ಬಾದರಾಯಣರ
"ಬ್ರಹ್ಮಸೂತ್ರ"(ವೇದಾಂತಸೂತ್ರ)ಗಳಿಗೆ ಭಾಷ್ಯವನ್ನು ರಚಿಸಿದರು. ಉಪನಿಷತ್ತುಗಳಿಗೆ ವ್ಯಾಖ್ಯಾನ ನೀಡಿದರು;ಅಲ್ಲದೆ ಶ್ರೀಮದ್ಭಗವದ್ಗೀತೆಗೆ ಭಾಷ್ಯವನ್ನು ಬರೆದು ಪ್ರಸ್ಥಾನತ್ರಯಗಳನ್ನು ಪೂರ್ಣಗೊಳಿಸಿದರು. ಇವರು ರಚಿಸಿದ "ಭಜ ಗೋವಿಂದಮ್" ಸ್ತೋತ್ರ ಅತ್ಯಂತ ಪ್ರಸಿದ್ಧವಾದುದು. ಹಲವಾರು ಇತರ ಸ್ತೋತ್ರಗಳನ್ನೂ ಶಂಕರರು ರಚಿಸಿದ್ದಾರೆ
ಸಂಸ್ಕೃತದಲ್ಲಿ "ದ್ವಿ" ಎಂದರೆ ಎರಡು ಎಂದರ್ಥ. ಹಾಗಾಗಿ "ಅ" + "ದ್ವೈತ" ಅಂದರೆ "ಎರಡಲ್ಲದ್ದು" ಎಂದು ಅರ್ಥೈಸಬಹುದು. ಅದ್ವೈತಸಿಧ್ಧಾಂತದ ಮೂಲ ಸಾರವೇ ಇದು. "ಆತ್ಮ" ಮತ್ತು "ಪರಮಾತ್ಮ" ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ.ಆತ್ಮನೇ ಪರಮಾತ್ಮ (ದೇವರು). ಪರಮಾತ್ಮನೇ ಆತ್ಮ. "ಅಹಂ ಬ್ರಹ್ಮಾಸ್ಮಿ" (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), "ತತ್ ತ್ವಮ್ ಅಸಿ" (ನೀನು ಅದೇ ಆತ್ಮದಿಂದ ಆಗಿರುವೆ) ಎಂಬುದು ಅದ್ವೈತ ತತ್ವದ ಮೂಲ ಮಂತ್ರ. ಇದಲ್ಲದೇ ಆದಿ ಶಂಕರಾಚಾರ್ಯರುಪರಮಾತ್ಮ, ಅಂದರೆ "ಆತ್ಮ", ಅದು ಮಾತ್ರ ಸತ್ಯ; ಈ ಜಗತ್ತಿ ನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ "ಸರ್ವಂ ಬ್ರಹ್ಮಮಯಂ ಜಗತ್" (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು:
(23.4.2015 ರಂದು ಶಂಕರ ಜಯಂತಿ ತನ್ನಿಮಿತ್ತ ಲೇಖನ)
-ಹನುಮಂತ.ಮ.ದೇಶಕುಲಕಣಿ೯
ಸಾ.ಭೋಗೇನಾಗರಕೊಪ್ಪ-581196
ಇವರು 8 ನೇ(ಕ್ರಿ.ಶ್.788) ಶತಮಾನದಲ್ಲಿ ಜನಿಸಿದರು ಎಂದು ನಂಬಲಾಗಿದೆ. ಇವರು ಹುಟ್ಟಿದ್ದು ಕೇರಳ ರಾಜ್ಯದ ಕಾಲಡಿ ಎಂಬ ಹಳ್ಳಿಯ ಒಂದು ಬಡ ವಿಶ್ವಬ್ರಾಹ್ಮಣ ಕುಟುಂಬದಲ್ಲಿ. ಹುಟ್ಟಿದ ದಿನ ವಿಭವ ಸಂವತ್ಸರದ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯಂದು. ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡರು. ಆಧ್ಯಾತ್ಮಿಕತೆಯಲ್ಲಿ ಆಸಕ್ತಿತಳೆದ ಇವರು ಸನ್ಯಾಸತ್ವವನ್ನು ಸ್ವೀಕರಿಸುವತ್ತ ಒಲವು ತೋರಿದರು. ಆದರೆ ಒಬ್ಬನೇ ಮಗನಾಗಿದ್ದ ಶಂಕರ ರನ್ನು ಸನ್ಯಾಸಿಯಾಗಿ ನೋಡಲು ತಾಯಿಗೆ ಮನಸ್ಸಿರಲಿಲ್ಲ. ಹಾಗಾಗಿ ತಾಯಿಯ ಮನವೊಲಿಸಲು ಶಂಕರರು ಬಹಳ ಕಷ್ಟಪಡಬೇಕಾಯಿತು.ಆಕೆಯ ಅಂತಿಮ ಕ್ಷಣಗಳಲ್ಲಿ ತಾನು ಎಲ್ಲಿದ್ದರೂ ಆಕೆಯ ಎದುರು ಬಂದು ನಿಲ್ಲುವುದಾಗಿ ಮಾತು ಕೊಟ್ಟ ಶಂಕರರು ಸೂಕ್ತ ಗುರುವಿಗಾಗಿ ಹುಡುಕುತ್ತಾ ತಮ್ಮ ಪಯಣವನ್ನಾರಂಭಿಸಿದರು. ತಾಯಿಗೆ ಕೊಟ್ಟ ಮಾತಿನ ಪ್ರಕಾರ ಆಕೆಯ ಕೊನೆಗಾಲದಲ್ಲಿ ಕಾಲಟಿಗೆ ಹಿಂದಿರುಗಿದ ಶಂಕರರು ಆಕೆಯ ಅಂತಿಮ ವಿಧಿಗಳನ್ನು ಪೂರೈಸಿದರು.ನರ್ಮದಾ ನದಿ ತೀರದಲ್ಲಿ ಗೋವಿಂದ ಭಗವತ್ಪಾದರನ್ನು ಭೇಟಿಯಾದ ಶಂಕರರು ಅವರನ್ನು ತನ್ನ ಗುರುಗಳನ್ನಾಗಿ ಸ್ವೀಕರಿಸಿದರು. ಅವರಿಂದ ಯೋಗ, ವೇದ, ಉಪನಿಷತ್, ವೇದಾಂತಗಳನ್ನು ಅಭ್ಯಸಿದದ ನಂತರ ಕಾಶಿಗೆ ತೆರಳಿ ಅಲ್ಲಿ ಕೆಲವರನ್ನು ತಮ್ಮ ಶಿಷ್ಯರನ್ನಾಗಿಸಿಕೊಂಡು ಅವರಿಗೂ ವೇದಾಂತದ ಪಾಠ ಹೇಳಿಕೊಟ್ಟರು.
ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ಶಂಕರರು ಅನೇಕರನ್ನು ಅಧ್ಯಾತ್ಮಕ್ಕೆ ಸಂಬಂಧಪಟ್ಟ ವಾದದಲ್ಲಿ ಸೋಲಿಸಿದರು. ಇವುಗಳಲ್ಲಿ ಮಂಡನ ಮಿಶ್ರರನ್ನು ವಾದದಲ್ಲಿ ಸೋಲಿಸಿದ ಘಟನೆ ಬಹು ಪ್ರಮುಖವಾದುದು. ಮಂಡನ ಮಿಶ್ರರೇ ನಂತರ ಶ್ರೀ ಸುರೇಶ್ವರಾಚಾಯ೯ ಎಂಬ ಹೆಸರಿನಿಂದ ಪ್ರಸಿದ್ಧರಾದ ಶಿಷ್ಯರಾದರು.ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠ (ಮಠ) ಗಳನ್ನು ಉತ್ತರದಲ್ಲಿ: ಬದರಿ ಪೀಠ - ಉತ್ತರ ಜ್ಯೋತಿರ್ ಮಠದಕ್ಷಿಣದಲ್ಲಿ: ಶೃಂಗೇರಿ ಪೀಠ - ದಕ್ಷಿಣ ಶಾರದಾ ಮಠಪೂರ್ವದಲ್ಲಿ: ಪುರಿ ಪೀಠ - ಪೂರ್ವಾ ಗೋವರ್ಧನ ಮಠಪಶ್ಚಿಮದಲ್ಲಿ ದ್ವಾರಕಾ ಪೀಠ - ಪಶ್ಚಿಮ ಮಠ ಸ್ಥಾಪಿಸಿ, ಪ್ರತಿಯೊಂದು ಪೀಠಕ್ಕೂ ತಮ್ಮ ಒಬ್ಬೊಬ್ಬ ಶಿಷ್ಯರನ್ನು ಪೀಠಾಧಿಪತಿಯನ್ನಾಗಿಸಿದರು."ಅದ್ವೈತ" ಸಿದ್ಧಾಂತ ವನ್ನು ಜನಪ್ರಿಯಗೊಳಿಸಿದರು. ಹಲವಾರು ಪಂಡಿತರನ್ನೂ ಶಾಸ್ತ್ರವೇತ್ತರನ್ನೂ ಜಯಿಸಿ, ಸರ್ವಜ್ಞ ಪೀಠವನ್ನೇರಿದರು. ಭಾರತದ ದಕ್ಷಿಣದಲ್ಲಿ ವಾದ ಮಾಡಿ ತಮ್ಮನ್ನು ಜಯಿಸುವವರೇ ಇಲ್ಲವೆಂದು ಹೀಗಳೆದು ಶಾರದೆಯ ದೇಗುಲದ ದಕ್ಷಿಣದ ಬಾಗಿಲನ್ನು ಮುಚ್ಚಿಸಿದ್ದ ಕಾಶ್ಮೀರದ ಪಂಡಿತರ ಬಾಯಿ ಮುಚ್ಚಿಸಿದರು;
ಶಂಕರರು ಬಾದರಾಯಣರ
"ಬ್ರಹ್ಮಸೂತ್ರ"(ವೇದಾಂತಸೂತ್ರ)ಗಳಿಗೆ ಭಾಷ್ಯವನ್ನು ರಚಿಸಿದರು. ಉಪನಿಷತ್ತುಗಳಿಗೆ ವ್ಯಾಖ್ಯಾನ ನೀಡಿದರು;ಅಲ್ಲದೆ ಶ್ರೀಮದ್ಭಗವದ್ಗೀತೆಗೆ ಭಾಷ್ಯವನ್ನು ಬರೆದು ಪ್ರಸ್ಥಾನತ್ರಯಗಳನ್ನು ಪೂರ್ಣಗೊಳಿಸಿದರು. ಇವರು ರಚಿಸಿದ "ಭಜ ಗೋವಿಂದಮ್" ಸ್ತೋತ್ರ ಅತ್ಯಂತ ಪ್ರಸಿದ್ಧವಾದುದು. ಹಲವಾರು ಇತರ ಸ್ತೋತ್ರಗಳನ್ನೂ ಶಂಕರರು ರಚಿಸಿದ್ದಾರೆ
ಸಂಸ್ಕೃತದಲ್ಲಿ "ದ್ವಿ" ಎಂದರೆ ಎರಡು ಎಂದರ್ಥ. ಹಾಗಾಗಿ "ಅ" + "ದ್ವೈತ" ಅಂದರೆ "ಎರಡಲ್ಲದ್ದು" ಎಂದು ಅರ್ಥೈಸಬಹುದು. ಅದ್ವೈತಸಿಧ್ಧಾಂತದ ಮೂಲ ಸಾರವೇ ಇದು. "ಆತ್ಮ" ಮತ್ತು "ಪರಮಾತ್ಮ" ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ.ಆತ್ಮನೇ ಪರಮಾತ್ಮ (ದೇವರು). ಪರಮಾತ್ಮನೇ ಆತ್ಮ. "ಅಹಂ ಬ್ರಹ್ಮಾಸ್ಮಿ" (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), "ತತ್ ತ್ವಮ್ ಅಸಿ" (ನೀನು ಅದೇ ಆತ್ಮದಿಂದ ಆಗಿರುವೆ) ಎಂಬುದು ಅದ್ವೈತ ತತ್ವದ ಮೂಲ ಮಂತ್ರ. ಇದಲ್ಲದೇ ಆದಿ ಶಂಕರಾಚಾರ್ಯರುಪರಮಾತ್ಮ, ಅಂದರೆ "ಆತ್ಮ", ಅದು ಮಾತ್ರ ಸತ್ಯ; ಈ ಜಗತ್ತಿ ನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ "ಸರ್ವಂ ಬ್ರಹ್ಮಮಯಂ ಜಗತ್" (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು:
(23.4.2015 ರಂದು ಶಂಕರ ಜಯಂತಿ ತನ್ನಿಮಿತ್ತ ಲೇಖನ)
-ಹನುಮಂತ.ಮ.ದೇಶಕುಲಕಣಿ೯
ಸಾ.ಭೋಗೇನಾಗರಕೊಪ್ಪ-581196
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ